June 11, 2021

ಚಿ.ಶಿ.ನಿ.ನ್ಯೂಸ್ --ಗೋಪಾಲಪುರ

 ವಿಕಲಚೇತನರಿಗೆ ಲಸಿಕೆ ಅಭಿಯಾನ

ಬೆಂಗಳೂರು ನಗರ ಜಿಲ್ಲೆ ದಾಸನಪುರ ಹೋಬಳಿ ಗೋಪಾಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಲಸಿಕೆ ಹಾಕುವ ಅಭಿಯಾನ ಕಾರ್ಯಕ್ರಮ ನಡೆಯಿತ್ತು. ಈ ಕುರಿತು ವರದಿ ಇಲ್ಲಿದೆ.


{ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ಗೋಪಾಲಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರವಿಕುಮಾರ್,ವಾತ್ಸಲ್ಯ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ವೀಣಾ ರಮೇಶ್,ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಮಲಮ್ಮ ಉಪಸ್ಥಿತರಿದ್ದರು.}

ಬೆಂಗಳೂರು:-ದಾಸನಪುರ ಹೋಬಳಿ ಗೋಪಾಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಲಸಿಕೆ ಹಾಕುವ ಅಭಿಯಾನಕ್ಕೆ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನದೀಮ್ ವಿಕಲಚೇತನರೊಬ್ಬರಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 60 ವಿಕಲಚೇತನರಿಗೆ ಲಸಿಕೆಯನ್ನು ನೀಡಲಾಯಿತ್ತು. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್ ಅವರು ಮಾತನಾಡಿ "ವಿಕಲಚೇತನರಿಗೆ ಮನೆ ಮನೆಗಳ ಬಳಿ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳಬೇಕು. ಅವರ ಆರೋಗ್ಯದ ಬಗ್ಗೆ ಕಾಳಜಿಯನ್ನು ತೋರಬೇಕು. ಲಸಿಕೆಯು ಎಲ್ಲರಿಗೂ ತಲುಪಬೇಕಾಗಿದೆ" ಎಂದು ತಿಳಿಸಿದರು.

ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಮಲಮ್ಮ,ರೆಡ್ ಕ್ರಾಸ್ ಬೆಂಗಳೂರು ನಗರ ಘಟಕದ ಜಂಟಿ ಕಾರ್ಯದರ್ಶಿ ಎಚ್,ಅರ್,ರವೀಶ್ ಹಾಗೂ ವಾತ್ಸಲ್ಯ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ವೀಣಾ ರಮೇಶ್ , ವಿಕಲಚೇತನದ ಸ್ಥಳೀಯ ಸಮಾಜ ಸೇವಕ ಅರುಣ್ ಕುಮಾರ್ ವೈದ್ಯಾಧಿಕಾರಿ ಜ್ಞಾನ ಪ್ರಕಾಶ್ ಉಪಸ್ಥಿತರಿದ್ದರು.  ಲಸಿಕೆ ಪಡೆದ ವಿಕಲಚೇತನರಿಗೆ ಮಹಾಲಕ್ಷ್ಮೀ ಲೇಔಟ್‍ನ ವಾಯ್ಸ ಆಫ್ ನೀಡ್ ಫೌಂಡೇಶನ್ ಉಚಿತ ಆಹಾರದ ಕಿಟ್‍ಗಳನ್ನು ವಿತರಿಸಿತ್ತು.

ಕಾರ್ಯಕ್ರಮವನ್ನು ಬೆಂಗಳೂರು ರೆಡ್ ಕ್ರಾಸ್ ಸಂಸ್ಥೆ ಮತ್ತು ಗೋಪಾಲಪುರ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿತ್ತು. 


ಲಸಿಕೆ ಪಡೆದ ವಿಕಲಚೇತನರಿಗೆ ಮಹಾಲಕ್ಷ್ಮೀ ಲೇಔಟ್‍ನ ವಾಯ್ಸ ಆಫ್ ನೀಡ್ ಫೌಂಡೇಶನ್ ಉಚಿತ ಆಹಾರದ ಕಿಟ್‍ಗಳನ್ನು ವಿತರಿಸಿತ್ತು.

No comments:

Post a Comment

ಬೂತ್ ಮಟ್ಟದಲ್ಲಿ ಸಂಘಟನೆಗೆ ಕಾಂಗ್ರೇಸ್ ಗಾಂಧಿ ನಡೆ

ಸೋಲದೇವನಹಳ್ಳಿ ಗ್ರಾಮದಲ್ಲಿ ನಡೆದ ಗಾಂಧಿ ನಡೆ ಕಾರ್ಯಗಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮಾತನಾಡಿದರು. ಹಿರಿಯ ಮುಖಂಡರಾದ ವೀರಪ್ಪಮೊ...