ಕನ್ನಡ ಚಿತ್ರರಂಗದ ನಿರ್ಮಾಪಕ ಕೆ.ಸಿ.ಎನ್. ಚಂದ್ರಶೇಖರ್ ಇನ್ನಿಲ್ಲ
{ಹುಲಿಹಾಲಿನ ಮೇವು ಚಿತ್ರವನ್ನು ನಿರ್ಮಿಸಿದ್ದ,ಬೆಂಗಳೂರಿನ ನವರಂಗ್,ಊರ್ವಶಿ,ದೊಡ್ಡಬಳ್ಳಾಪುರದ ರಾಜ್ ಕಮಲ್ ಚಿತ್ರ ಮಂದಿರಗಳ ಮಾಲೀಕರಾದ ಕೆ.ಸಿ.ಎನ್. ಚಂದ್ರಶೇಖರ್ ಸೋಮವಾರ ನಿಧನರಾಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.}
ಬೆಂಗಳೂರು ಜೂನ್ 14:-ಕನ್ನಡ ಚಿತ್ರರಂಗದ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ (69) ಸೋಮವಾರ ನಿಧನವಾಗಿದ್ದಾರೆ. ಕನ್ನಡ,ತೆಲಗು,ತಮಿಳು,ಬಂಗಾಲಿ ಭಾಷೆಗಳಲ್ಲಿ ಸಿನಿಮಾಗಳನ್ನು ಅವರು ನಿರ್ಮಿಸಿದ್ದರು. ಕೆಲ ದಿನಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
1979ರಲ್ಲಿ ಡಾ.ರಾಜ್ ಕುಮಾರ್ ಅವರಿಗೆ ಹುಲಿಯ ಹಾಲಿನ ಮೇವು ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಶಂಕರ್ ಗುರು ಸಿನಿಮಾಕ್ಕೆ ಸಹ ನಿರ್ಮಾಪಕರಾಗಿದ್ದರು. (1981ರಲ್ಲಿ) ನಾನೊಬ್ಬ ಕಳ್ಳ ಚಿತ್ರದಲ್ಲಿ ಅಭಿನಯವನ್ನು ಮಾಡಿದ್ದರು. ಭಕ್ತ ಜ್ಞಾನದೇವ,ಧರ್ಮಯುದ್ದ,ತಾಯಿ ಸೇರಿದ್ದಂತೆ ಸುಮಾರು 50 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.
ಎರಡು ಬಾರಿ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ,ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ತಮ್ಮ ಸೇವೆಯನ್ನು ಸಲ್ಲಿಸಿದ್ದರು. ಭಾರತೀಯ ಚಲನಚಿತ್ರ ಒಕ್ಕೂಟದ ಅಧ್ಯಕ್ಷರಾಗಿ ಮೂರು ಬಾರಿ ಆಯ್ಕೆಯಾಗಿದ್ದರು.
ಕೆ.ಸಿ.ಎನ್. ಚಂದ್ರಶೇಖರ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
No comments:
Post a Comment